e-yellapur.com. News. ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ e-yellapur.com ವತಿಯಿಂದ ಏರ್ಪಡಿಸಲಾದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೊ ಸ್ಫರ್ಧೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಉತ್ತರಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಪ್ರದೇಶಗಳಿಂದ ಈ ಸ್ಫರ್ಧೆಗೆ ನಿರೀಕ್ಷೆಗೂ ಮೀರಿ ಮುದ್ದುಕೃಷ್ಣ ವೇಷಧಾರಿ ಮಕ್ಕಳ ಫೋಟೋಗಳು ಬಂದಿವೆ.
ಫೋಟೋ ಕಳಿಸಲು ಕೊನೆಯ ದಿನವಾಗಿದ್ದ ಅ.27 ರ ಒಳಗೆ ಸ್ವೀಕೃತವಾದ ಮಕ್ಕಳ ಮುದ್ದು ಕೃಷ್ಣ ವೇಷ ಫೋಟೊಗಳನ್ನು ನಿರ್ಣಾಯಕರಿಗೆ ಕಳಿಸಲಾಗಿದೆ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿದ್ದು, ಈ ಸ್ಫರ್ಧೆಯ ಫಲಿತಾಂಶವನ್ನು ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಘೋಷಿಸಲಾಗುವುದು. ಪ್ರಥಮ,ದ್ವಿತಿಯ,ತೃತೀಯ ಬಹುಮಾನಿತ ಮಕ್ಕಳಿಗೆ ಸದ್ಯದಲ್ಲಿಯೇ ಯಲ್ಲಾಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರಿಂದ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಕುರಿತು ಸ್ಫರ್ಧಾ ವಿಜೇತ ಮಕ್ಕಳ ಪಾಲಕರಿಗೆ ಫೋನ್ ಮೂಲಕ ತಿಳಿಸಲಾಗುವುದು. ಈ ಸ್ಫರ್ಧಾ ಕಾರ್ಯಕ್ರಮಕ್ಕೆ ಖ್ಯಾತ ಆಭರಣ ಮಳಿಗೆಯಾದ ಗೌತಮ್ ಜುವೆಲ್ಲರ್ಸ್ ಮಾಲಕರಾದ ಪ್ರಕಾಶ್ ಎಂ. ಶೇಟ್ ಅವರು ಸಹಪ್ರಾಯೋಜಕರಾಗಿದ್ದಾರೆ. ಈ ಸ್ಫರ್ಧೆಯಲ್ಲಿ ಭಾಗವಹಿಸಿ, ಉತ್ತಮ ಫೋಟೋ ಎಂದು ಆಯ್ಕೆಯಾದ 10 ಆಕರ್ಷಕ ಮುದ್ದುಕೃಷ್ಣ ವೇಷ ಧರಿಸಿದ್ದ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಸ್ಫರ್ಧೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ ಎಲ್ಲ ಮಕ್ಕಳಿಗೆ ಹಾಗೂ ಪಾಲಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ.