7-10-2021. ಗುರುವಾರ.
E-YELLAPUR.COM NEWS.
ಯಲ್ಲಾಪುರ ಪಟ್ಟಣದ ನಾಯಕನಕೆರೆ ಪ್ರದೇಶದಲ್ಲಿ ನೆಲೆನಿಂತಿರುವ ಶ್ರೀಬಾಲಾ ತ್ರಿಪುರ ಸುಂದರಿ ಶಾರದಾಂಬಾ ಸನ್ನಿಧಿಯು ಜಾಗ್ರತ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿದೆ. ಶ್ರೀಸ್ವರ್ಣವಲ್ಲೀ ಮಠದ ಶಾಖಾ ಮಠವಾದ ಈ ದೇವಾಲಯವು ಶತಮಾನಗಳ ಹಿಂದೆ ಮಹಾ ತಪಸ್ವಿಗಳಾದ ಆತ್ಮಾನಂದ ಸರಸ್ವತೀ ಸ್ವಾಮೀಜಿಯವರಿಂದ ಪ್ರತಿಷ್ಠಾಪಿಸಲ್ಪಟ್ಟಿತು.
ಈಗ ಈ ದೇವಾಲಯವನ್ನು ಹೊಸದಾಗಿ ನಿರ್ಮಿಸಲಾಗಿದ್ದು, ಸ್ವರ್ಣವಲ್ಲೀ ಶ್ರೀಗಳಿಂದ ಪುನಃಪ್ರತಿಷ್ಠೆಯಾಗಿದೆ. ವಿಶಾಲವಾದ ಕೆರೆ,ಸುಂದರ ಪರಿಸರದಿಂದ ಕೂಡಿದ ದೇವಾಲಯದ ಆವಾರದಲ್ಲಿ ಆಂಜನೇಯ,ಶಂಕರಾಚಾರ್ಯ,ನಾಗ ದೇವತಾ ದೇವಾಲಯಗಳಿವೆ. ಪಾಠ ಶಾಲೆ ಇದೆ. ಪ್ರತಿ ನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.
ನವದುರ್ಗಾ ದರ್ಶನ -1 VIDEO
ನವದುರ್ಗಾ ದರ್ಶನ -1 VIDEO
ಪ್ರಸ್ತುತ ಶರನ್ನವರಾತ್ರಿಯ ಸಂದರ್ಭಲ್ಲಿ ನಿತ್ಯ ಸಪ್ತಶತೀ ಪಾರಾಯಣ,ವೇದಪಾರಾಯಣ,ಮಹಾಪೂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಲಲಿತಾ ಪಂಚಮಿಯಂದು ನವಚಂಡಿ ಹವನ ಹಾಗೂ ವಿಜಯ ದಶಮಿಯಂದು ಸನ್ನಿಧಿಯಲ್ಲಿ ವಿಶೇಷವಾದ ಅಕ್ಷರಾರಂಭ ಸೇವೆ ನಡೆಯುತ್ತದೆ.
ವರ್ಷಂಪ್ರತಿ ನಡೆಯುತ್ತಿದ್ದ ಅನ್ನಪ್ರಸಾದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ವರ್ಷ ಇರುವುದಿಲ್ಲ ಎಂದು ತಿಳಿಸಲಾಗಿದೆ.
ADVT
ನವರಾತ್ರಿಯ ಇಂದಿನ ವಿಶೇಷತೆ;
ನವರಾತ್ರಿಯ ಮೊದಲ ದಿನ ದೇವಿಯನ್ನು ಶೈಲಪುತ್ರಿ ರೂಪದಲ್ಲಿ ಪೂಜಿಸಲಾಗುತ್ತದೆ.
ವಂದೇ ವಾಂಛಿತ ಲಾಭಾಯ ಚಂದ್ರಾರ್ಧಕೃತಶೇಖರಂ |
ವೃಷಾರೂಢಾಂ ಶೂಲಧರಾಂ ಶೈಲಪುತ್ರೀಂ ಯಶಸ್ವಿನೀಂ ||
ಶೈಲ ಎಂದರೆ ಪರ್ವತ. ಅವಳು ಅಷ್ಟು ದೃಢ. ಆದ್ದರಿಂದ ಈ ದೇವಿಗೆ ಆ ಹೆಸರು ಬಂದಿದೆ. ಈ ದೇವಿಯನ್ನು ಪೂಜಿಸಿದಾಗ ನಮಗೆ ದೃಢತೆ ಹೆಚ್ಚಾಗುತ್ತದೆ. ಪಾರ್ವತಿ ದೇವಿ ಶಿವನನ್ನು ಪಡೆಯಲು ಕಠೋರ ತಪಸ್ಸು ಮಾಡಿದ್ದಳು. ಈಕೆಯನ್ನು ಪರೀಕ್ಷೆ ಮಾಡಲು ಸಪ್ತ ಋಷಿಗಳು ಬಂದಿದ್ದರಂತೆ. ಆದರೆ ದೇವಿ ತನ್ನ ಸಂಕಲ್ಪದಂತೆ ಬೆಟ್ಟದಂತೆ ದೃಢವಾಗಿದ್ದಳು. ದೇವಿ ಶೈಲಪುತ್ರಿಯನ್ನು ಯಾವಾಗಲೂ ಆದಿಶಕ್ತಿಯೆಂದು ಗುರುತಿಸಲಾಗಿದೆ. ಆಕೆ ಗೂಳಿ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ಆಕೆಯನ್ನು ವೃಷರುಧ ಎಂದು ಕರೆಯಲಾಗುತ್ತದೆ. ಆಕೆಗೆ ಎರಡು ಕೈಗಳಿದ್ದು, ಒಂದರಲ್ಲಿ ತ್ರಿಶೂಲ ಮತ್ತೊಂದರಲ್ಲಿ ಕಮಲದ ಹೂವಿದೆ. ಅರ್ಧಚಂದ್ರಾಕೃತಿಯು ಆಕೆಯ ಹಣೆಯಲ್ಲಿದೆ. ದೇವಿ ಶೈಲಪುತ್ರಿಯು ಈ ಮೂಲಾಧಾರ ಚಕ್ರದ ದೇವತೆ. ಈ ಚಕ್ರವು ಸ್ಥಿರತೆ ಮತ್ತು ಶಕ್ತಿಯ ಪ್ರತೀಕವಾಗಿದೆ. ಜೀವನದಲ್ಲಿ ಶಕ್ತಿ ಹಾಗೂ ಸ್ಥಿರತೆ ಪ್ರಾಪ್ತಿಯಾಗಲು ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯನ್ನು ಪೂಜಿಸಬೇಕು.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/FIBfndirvSLCTUzJq4BMP1
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related