E-YELLAPUR.COM NEWS. ನಾಳೆ ವಿದ್ಯುತ್ ವ್ಯತ್ಯಯ. ತಾಲೂಕಿನ ಕಿರವತ್ತಿಯ 110/11 ಕೆ.ವಿ.ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಇರುವುದರಿಂದ ಯಲ್ಲಾಪುರ ಪಟ್ಟಣ,ಇಡಗುಂದಿ,ವಜೃಳ್ಳಿ,ಬೀಸಗೋಡ,ಆನಗೋಡ,ದೇಹಳ್ಳಿ,ಮಾಗೋಡ,ಉಪ್ಪಳೇಶ್ವರ,ಕಣ್ಣಿಗೇರಿ ಮಾರ್ಗದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ( ಅಂತಿಮ ಬದಲಾವಣೆಗೆ ಒಳಪಟ್ಟಿದೆ ).
ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಆವಾರದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಧ್ವಜಾರೋಹಣ ನೆರವೇರಿಸಿದರು.
ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಆವಾರದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಿ.ಆರ್.ಪಿ.ಸಂಜೀವ ಕುಮಾರ್ ಹೊಸ್ಕೇರಿ ಹಾಗೂ ಇತರರು ಇದ್ದರು.
ತಾಲೂಕಿನ ಬೈಲಂದೂರು ಗೌಳಿವಾಡಾ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಶಾಲಾ ಅಭಿವೃದ್ಧಿ ಸಮೀತಿಯ ಭಕ್ಕು ಥೋರತ್ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕರಾದ ನಾರಾಯಣ ಕಾಂಬ್ಳೆ, ನಾಗರಾಜ ಹುಡೇದ ಇದ್ದರು.
ಪಟ್ಟಣದ ಪೋಲೀಸ್ ಠಾಣಾ ಆವಾರದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿಪಿಐ ಸುರೇಶ ಯಳ್ಳೂರು ಧ್ವಜಾರೋಹಣ ನೆರವೇರಿಸಿದರು.
ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ ಸಲಹೆಗಾರ ತಿಮ್ಮಣ್ಣ ಭಟ್ ಧ್ವಜಾರೋಹಣ ನೆರವೇರಿಸಿದರು. ಅವಧಾನಿ ಗಣೇಶ ಭಟ್ಟ ಕೊಪ್ಪಲತೋಟ, ವ್ಯವಸ್ಥಾಪಕ ಗುರುರಾಜ ಕುಂದಾಪುರ ಹಾಗೂ ಶಿಕ್ಷಕರು, ಸಿಬ್ಬಂದಿಗಳು, ವಿಧ್ಯಾರ್ಥಿಗಳು ಇದ್ದರು.