30-1-2022. ಭಾನುವಾರ.
E-YELLAPUR.COM NEWS
ಯಲ್ಲಾಪುರ.
ಪಟ್ಟಣದ ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾ ವಿಜೇತ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಬಹುಮಾನವನ್ನು ವಿತರಿಸಿದ ಪ್ರಗತಿಪರ ಕೃಷಿಕ, ಶಿಕ್ಷಣ ಪ್ರೇಮಿ ನಾರಾಯಣ ಹೆಗಡೆ ಗಡಿಕೈ ಮಾತನಾಡಿ, ಪಠ್ಯ ಚಟುವಟಿಕೆಗಳಿಗಿಂತ ಶಾಲೆಗಳಲ್ಲಿ ಕಲಿಸುವ ಜೀವನ ಶಿಕ್ಷಣ ಅಮೂಲ್ಯವಾದದ್ದು. ಕೇವಲ ಪುಸ್ತಕಗಳನ್ನು ಓದುವುದರಿಂದ ಎಲ್ಲ ರೀತಿಯ ಶಿಕ್ಷಣ ದೊರೆಯುವುದಿಲ್ಲ. ಶಾಲಾ ಹಂತದಲ್ಲಿ ಜೀವನ ಶಿಕ್ಷಣ ಒದಗಿಸುವ ಅಗತ್ಯವಿದೆ. ಬಾಲ್ಯದಲ್ಲಿಯೇ ಪಡೆದ ಶಿಕ್ಷಣ ಶಾಶ್ವತವಾಗಿರುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸ್ಪೂರ್ತಿದಾಯಕ ವಿಚಾರಗಳನ್ನು ಕಲಿಸಬೇಕು. ಸಾಧಕರ ಬಗ್ಗೆ ಪರಿಚಯಿಸಿ ಅವರ ಸಾಧನೆಯ ಶ್ರಮದ ಕುರಿತು ವಿವರಿಸಬೇಕು. ಮಹತ್ವದ ಸಾಧನೆ ಮಾಡಿದ ವ್ಯಕ್ತಿಗಳ ಜೀವನದ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಎಂದರು.
ADVT
ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅವರು ಗೌರವಿಸಿದರು. ಆದರ್ಶ ವಿದ್ಯಾರ್ಥಿಯಾಗಿ ಗುರುತಿಸಿಕೊಂಡ ಆದರ್ಶ ಪ್ರಸನ್ನ ಹೆಗಡೆಕಟ್ಟೆಗೆ ಸನ್ಮಾನಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಗುರುರಾಜ ಕುಂದಾಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ, ಶಿಕ್ಷಕರಾದ ಮುಕ್ತಾ ಶಂಕರ್, ಗಣೇಶ ಭಟ್ಟ, ಪ್ರಸನ್ನ ಹೆಗಡೆ, ಲೆಕ್ಕಪರಿಶೋಧಕ ವಿಘ್ನೇಶ್ವರ ಗಾಂವ್ಕರ್, ಪ್ರಮುಖರಾದ ಪ್ರಕಾಶ ಭಟ್ಟ, ಆಸ್ಮಾ ಶೇಖ್ ಮೊದಲಾದವರು ಇದ್ದರು.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related