31-1-2022. ಸೋಮವಾರ.

E-YELLAPUR.COM NEWS ಯಲ್ಲಾಪುರ.
ಪಟ್ಟಣ ಪಂಚಾಯತಿ ಮಾಸಿಕ ಸರ್ವ ಸಾಮಾನ್ಯ ಸಭೆಯು ಸುನಂದಾ ದಾಸ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ಈ ಸಭೆಯಲ್ಲಿ ಅರಣ್ಯ ಹಕ್ಕು ಸಮೀತಿಗಳ ರಚನೆಯ ಕುರಿತು ಹಾಗೂ ವಿವಿಧ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ನಿಖರ,ನಿರಂತರ,ಸಮಗ್ರ ವರದಿಗಾಗಿ e-yellapur.com digital news ಓದಿ. 2022-23 ನೇ ಸಾಲಿನ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚು ಮಾಡಲು ಸಭೆ ಅನುಮೋದನೆ ನೀಡಿತು. ಪಟ್ಟಣದ ವಿವಿದೆಡೆ ನಾಮ ಫಲಕಗಳನ್ನು ಅಳವಡಿಸಲು ಸ್ಥಳ ನಿಗದಿ ಹಾಗೂ ಸ್ಥಾಯಿ ಸಮೀತಿಯಲ್ಲಿ ಮಂಜೂರಿಯಾದ ಟೆಂಡರ್ ಗಳಿಗೆ ಅನುಮೋದನೆ ನೀಡುವ ಕುರಿತು ಬಿಸಿ,ಬಿಸಿ ಚರ್ಚೆ ನಡೆಯಿತು. ಸಭೆಯಲ್ಲಿ ಸ್ಥಾಯಿ ಸಮೀತಿಯ ಅಧ್ಯಕ್ಷ ಅಮಿತ್ ಅಂಗಡಿ, ಮುಖ್ಯಾಧಿಕಾರಿ ಸಂಗನಬಸವ, ಸಮಾಜಕಲ್ಯಾಣ ಇಲಾಖೆಯ ಮನಿಷ್ ನಾಯ್ಕ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಡಿ.ಎನ್.ಗಾಂವ್ಕಾರ್ ರಾಜೀನಾಮೆ ; ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ.

E-YELLAPUR.COM NEWS. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್.ಗಾಂವ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ ವಿಷಯವು ಸ್ಥಳೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ಡಿ.ಎನ್. ಗಾಂವ್ಕಾರ್ ರಾಜೀನಾಮೆ ವಿಷಯ ಪ್ರಕಟವಾಗುತ್ತಿದ್ದಂತೆಯೇ ಪರ-ವಿರೋಧ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ. ಸೋಮವಾರ ಹೊಸ ವಿಷಯವೊಂದು ಮುನ್ನೆಲೆಗೆ ಬಂದಿದೆ. ನಿಖರ,ನಿರಂತರ,ಸಮಗ್ರ ವರದಿಗಾಗಿ

e-yellapur.com digital news ಓದಿ. ಕಳೆದ ಅಕ್ಟೋಬರ್ 15 ರಂದೇ ರಾಜ್ಯ ಕಾಂಗ್ರೆಸ್ ಘಟಕದಿಂದ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಬೇರೊಬ್ಬರನ್ನು ನೇಮಿಸಿ ಆದೇಶ ಮಾಡಿದ ನೇಮಕಾತಿ ಪತ್ರವು ಜಾಲತಾಣಗಳಲ್ಲಿ ಈಗ ಎಲ್ಲೆಡೆ ವೈರಲ್ ಆಗಿದೆ. ಮೂರು ತಿಂಗಳ ಹಿಂದೆ ನೇಮಕವಾಗಿದ್ದರೂ ಇಷ್ಟು ದಿನ ಮುಚ್ಚಿಟ್ಟಿರುವುದು ಏಕೆ ಎಂಬ ಪ್ರಶ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಎದುರಾಗಿದೆ. ಈ ಆದೇಶ ಪತ್ರವು ತೀವೃ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಮುಂದಿನ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತು ಡಿ.ಎನ್.ಗಾಂವ್ಕಾರ್ ಅವರು e-yellapur.com digital news ಪ್ರತಿನಿಧಿಯೊಂದಿಗೆ ಮಾತನಾಡಿ, ಮೂರು ತಿಂಗಳ ಹಿಂದೆ ಬೇರೊಬ್ಬರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ವಿಷಯ ನನಗೆ ತಿಳಿದಿರಲಿಲ್ಲ. ಪಕ್ಷದ ವರಿಷ್ಠರು ಬಯಸಿದ್ದರೆ ಆಗಲೇ ರಾಜೀನಾಮೆ ನೀಡುತ್ತಿದ್ದೆ. ಇಷ್ಟು ದಿನದ ನಂತರ ಪತ್ರವನ್ನು ಬಹಿರಂಗಗೊಳಿಸಿರುವುದು ಪಕ್ಷಕ್ಕಾಗಿ 16 ವರ್ಷ ದುಡಿದ ನನ್ನ ಮನಸ್ಸಿಗೆ ಬಹಳ ಬೇಸರ ತರಿಸಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ADVT

ಸ್ನೇಹಸಾಗರ ಶಾಲೆಯಲ್ಲಿ ರಾಷ್ಟ್ರೀಯ ಹುತಾತ್ಮರ ದಿನಾಚರಣೆ.

ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಮಹನೀಯರ ಕುರಿತು ಮುಖ್ಯಾಧ್ಯಾಪಕ ವಾಸು ಎಸ್ ದತ್ತ ಅವರು ಮಾತನಾಡಿದರು. ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು. ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಇದ್ದರು.

ಯಲ್ಲಾಪುರ ತಾಲೂಕಿನಲ್ಲಿ ಸೋಮವಾರ 62 ಜನರಿಗೆ ಕೋವಿಡ್ ಸೋಂಕು

ತಾಲೂಕಿನಲ್ಲಿ ಸೋಮವಾರ 62 ಜನರಿಗೆ ಕೋವಿಡ್ ಸೋಂಕು ಧೃಢಪಟ್ಟಿದೆ. ಇಂದು 198 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589/

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.

https://chat.whatsapp.com/L2CReGIOXdX7UXCxXicb4Q

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading