26-2-2022. ಶನಿವಾರ.
E-YELLAPUR.COM NEWS. ಯಲ್ಲಾಪುರ. ತಾಲೂಕಿನ ವಿವಿದೆಡೆ ಅಡಿಕೆ ಹಾಗೂ ಕಾಳುಮೆಣಸು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಯಲ್ಲಾಪುರ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ತಾಲೂಕಿನ ಬಿಳಕಿಯ ಜಡಗಿನಕೊಪ್ಪದ ಫಿಲಿಪ್ ಕೃಷ್ಣಾ ಸಿದ್ದಿ ಹಾಗೂ ಆನಂದ ಸೋಮಾ ಸಿದ್ದಿ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಕಳ್ಳತನ ಮಾಡಿದ 2 ಕ್ವಿಂಟಾಲ್ ಕೆಂಪು ಅಡಕೆ, 22 ಕೆಜಿ ಕಾಳುಮೆಣಸು, ಕಳ್ಳತನ ಕ್ರತ್ಯಕ್ಕೆ ಉಪಯೋಗಿಸಿದ ಎರಡು ಬೈಕ್ ವಶಪಡಿಸಿಕೊಳ್ಳಲಾಗಿದೆ.
ADVT
ಈ ಆರೋಪಿಗಳು ತಾಲೂಕಿನ ಸವಣಗೆರೆ, ಹೊನ್ನಳ್ಳಿ, ಹೊಸ್ಮನೆ, ಕಲ್ಲಾರಜಡ್ಡಿ ಮುಂತಾದೆಡೆ ಅಡಕೆ ಹಾಗೂ ಕಾಳಮೆಣಸನ್ನು ಕಳ್ಳತನ ಮಾಡಿದ್ದರು. ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಸಿಪಿಐ ಸುರೇಶ ಯಳ್ಳೂರು ನೇತ್ರತ್ವದಲ್ಲಿ ಪಿಎಸ್ಸೈಗಳಾದ ಮಂಜುನಾಥ ಗೌಡರ್, ಪ್ರಿಯಾಂಕಾ ನ್ಯಾಮಗೌಡ, ಸಿಬ್ಬಂದಿಗಳಾದ ಬಸವರಾಜ ಹಗರಿ, ಮಹ್ಮದ್ ಶಫಿ, ಗಜಾನನ ನಾಯ್ಕ, ನಾಗಪ್ಪಾ ಲಮಾಣಿ, ಬಸವರಾಜ ಮಳಗಿನಕೊಪ್ಪ, ಸಕ್ರಪ್ಪಾ ಬ್ಯಾಳಿ, ಪರಶುರಾಮ. ಕೆ ನಂಧೀಶ,ವಿಜಯ,ಚನ್ನಕೇಶವ,ಚಿದಾನಂದ, ಪ್ರವೀಣ ಪೂಜಾರ್, ಪರಶುರಾಮ, ಶೋಭಾ ನಾಯ್ಕ ಮುಂತಾದವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅಪಘಾತದಲ್ಲಿ ವೃದ್ಧ ಸಾವು.
ಬೈಕ್ ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆ ಪಟ್ಟಣದ ಕೆಇಬಿ ಕಚೇರಿ ಸಮೀಪ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ರವೀಂದ್ರ ನಗರದ ನಿವಾಸಿ ಪಾಂಡುರಂಗ ನಾಯ್ಕ ಮೃತಪಟ್ಟಿದ್ದಾರೆ. ಇವರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದಿದೆ. ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಉಪ್ಪಳೇಶ್ವರದ ವಿಶ್ವನಾಥ ಗಣಪತಿ ಭಟ್ಟ ಗಾಯಗೊಂಡಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿಗೆ ಬೈಕ್ ಢಿಕ್ಕಿ, ಬೈಕ್ ಸವಾರರಿಗೆ ಗಾಯ.
ಕಾರೊಂದಕ್ಕೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ತಾಲೂಕಿನ ಹಳಿಯಾಳ ರಸ್ತೆಯ ಕೃಷ್ಣಗದ್ದೆ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಪಟ್ಟಣದ ಗಣಪತಿಗಲ್ಲಿಯ ಜಯಕುಮಾರ್ ಪಿಳ್ಳೆ ಹಾಗೂ ನೂತನ ನಗರದ ಇಬ್ರಾಹಿಂ ಶೇಕ್ ಗಾಯಗೊಂಡಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸವಾರರಿಬ್ಬರ ಮೇಲೆ ಹಲ್ಲೆ.
ಕಾರಿಗೆ ಢಿಕ್ಕಿಹೊಡೆದರು ಎಂಬ ಕಾರಣಕ್ಕೆ ಬೈಕ್ ಸವಾರರ ಮೇಲೆ ಕಾರಿನಲ್ಲಿದ್ದ ಮೂವರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಾರಿನಲ್ಲಿದ್ದ ಹುಬ್ಬಳ್ಳಿಯ ಅಶೋಕ ರಾಜನಾಳ,ಧಾರವಾಡದ ಸತೀಶ ಪಾಟೀಲ್, ಹಾಗೂ ಸುಭಾಷ ಪಾಟೀಲ್ ಎಂಬುವವರು ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬೈಕ್ ಸವಾರರು ದೂರು ದಾಖಲಿಸಿದ್ದಾರೆ.
ಟಾಟಾ ಎಸಿಇ ವಾಹನ ಹಾಗೂ ಲಾರಿ ಢಿಕ್ಕಿ ; ಮೂವರಿಗೆ ಗಾಯ.
ಟಾಟಾ ಎಸಿಇ ವಾಹನ ಹಾಗೂ ಲಾರಿ ಢಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ತಾಲೂಕಿನ ಹಳಿಯಾಳ ಕ್ರಾಸ್ ಸಮೀಪ ನಡೆದಿದೆ. ಈ ಘಟನೆಯಲ್ಲಿ ಟಾಟಾ ಎಸಿಇ ವಾಹನ ಚಾಲಕ ಹುಬ್ಬಳ್ಳಿಯ ಸುನೀಲ್ ಕರಾಟೆ, ಈ ವಾಹನದಲ್ಲಿದ್ದ ಹನುಮಂತ ಚಲುವಾದಿ ಮತ್ತು ಲಾರಿ ಚಾಲಕ ಕೇರಳದಾಶಿಕ್ ಅವರಿಗೆ ಗಾಯವಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebo ok.com/eyellapur
ನಮ್ಮ
FACEBOOK GROUP – https://www.facebook.com/groups/593852164946589/
group ಗೆ join ಆಗಿ.
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026 ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಪಡಿತರ ಚೀಟಿದಾರರಿಗೆ ಹಾಗೂ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರಿಗೆ ತಿಳಿಸುವುದೆನೆಂದರೆ 5,69,044 ಪಡಿತರ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026 ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡ ಅರ್ಜಿಗಳ…
Read more: ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026 ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು ಕದ್ದೊಯ್ದಿದ್ದಾರೆ. ಅರಣ್ಯ ಇಲಾಖೆಯವರು ಈ ಕುರಿತು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026 ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ, ಶಂಕರ, ಸೂರಜ್, ಕಿರಣ, ನಾಗರಾಜ, ಚಂದ್ರು,…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026 ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ ನರ್ಸರಿ ಎದುರು ಈ ಅಪಘಾತ ಸಂಭವಿಸಿತ್ತು.…
Read more: ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026 ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗುತ್ತಿದ್ದು ಈ ಸಂದರ್ಭದಲ್ಲಿ ಶಾಂತಿ…
Read more: ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026 ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸಲು ಎರಡು ದಿನಗಳಿಂದ ನಡೆಸಿದ ಪ್ರಯತ್ನ ಫಲಕಾರಿಯಾಗಿಲ್ಲ. ಶನಿವಾರ ಅರಣ್ಯ ಇಲಾಖೆ, ಕಂದಾಯ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026 ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ ನೂತನನಗರದಲ್ಲಿ ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದ 30 ಚೀಲದಲ್ಲಿದ್ದ ಅಂದಾಜು 51 ಸಾವಿರ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026 ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ: ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮೇಳವನ್ನು ಉದ್ಘಾಟಿಸಿದ ಬಾಲು ನಾಯಕ ಮಾತನಾಡಿ, ಸ್ವದೇಶಿ…
Read more: ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026 ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25…
Read more: ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation