27-2-2022. ಭಾನುವಾರ.

E-YELLAPUR.COM NEWS. ಯಲ್ಲಾಪುರ.

ಪಟ್ಟಣದ ಅಡಕೆ ಭವನದಲ್ಲಿ ಭಾನುವಾರ ಸಂತ ಸೇವಾಲಾಲ ಮಹಾರಾಜರ 283 ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಿತು. ವಿಜಯಪುರ ಜಿಲ್ಲೆಯ ಸಿಂದಗಿ ಕೆಸರೆಟ್ಟಿಯ ಸೋಮಲಿಂಗ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮವನ್ನು ಸಚಿವ ಶಿವರಾಮ ಹೆಬ್ಬಾರ್ ಉಧ್ಘಾಟಿಸಿದರು. ಬಂಜಾರಾ ಸಮುದಾಯದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಭಾರತ ಸೇವಾದಳದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ವಿಜಯ ಮಿರಾಶಿ, ದ್ಯಾಮಣ್ಣ ಬೋವಿವಡ್ಡರ್, ಈಶ್ವರ ರಾಥೋಡ, ರುದ್ರಯ್ಯಾ ಹಿರೇಮಠ, ಸಿ.ಪಿ.ರಾಥೋಡ, ಶಂಕರ ನಾಯಕ ಮುಂತಾದವರು ಇದ್ದರು. ಚಂದ್ರಶೇಖರ ನಾಯಕ ಸ್ವಾಗತಿಸಿದರು. ಗಂಗಾಧರ ಎಸ್.ಪಿ. ನಿರ್ವಹಿಸಿದರು.

ADVT

ಆರ್.ಎಸ್.ಎಸ್.ಸ್ವಯಂಸೇವಕರಿಂದ ಪಥಸಂಚಲನ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಭಾನುವಾರ ಯಲ್ಲಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಗಣವೇಶ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡರು. ಪಟ್ಟಣದ ವಿವಿಧ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಲಾಯಿತು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ

FACEBOOK GROUP – https://www.facebook.com/groups/593852164946589/

group ಗೆ join ಆಗಿ.

OLD POSTS..

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading