29-4-2022. ಶುಕ್ರವಾರ.
E-YELLAPUR.COM NEWS ಯಲ್ಲಾಪುರ.
ಯಲ್ಲಾಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ನಿರ್ಮಿಸಲಾದ ಅರಣ್ಯ ಇಲಾಖೆಯ ನೂತನ ವಸತಿ ಸಂಕೀರ್ಣವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ಉದ್ಘಾಟಿಸಿದರು.
ADVT
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಲಸ ಮಾಡುವ ಸಿಬ್ಬಂದಿಗಳು ಮಾನಸಿಕವಾಗಿ ನೆಮ್ಮದಿಯಿಂದ ಇದ್ದಾಗ ಮಾತ್ರ ಶಾಂತಿಯುತವಾಗಿ ಕೆಲಸ ಮಾಡುವುದಕ್ಕೆ ಸಾಧ್ಯವಾಗುತ್ತದೆ ಈ ಕಾರಣಕ್ಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಉತ್ತಮ ಗುಣಮಟ್ಟದ ವಸತಿ ಸಂಕೀರ್ಣವನ್ನು ನಿರ್ಮಿಸಲಾಗಿದೆ ಎಂದರು.
ADVT
ಕಳೆದ ಎರಡು ವರ್ಷಗಳಿಂದ ಯಲ್ಲಾಪುರದಲ್ಲಿ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ ಹೊಂದುತ್ತಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆಯವರ ಸೇವೆಯನ್ನು ಶ್ಲಾಘಿಸಿದ ಸಚಿವರು, ಹೆಗಡೆಯವರ ನಿವೃತ್ತಿ ಜೀವನಕ್ಕೆ ಶುಭಕೋರಿದರು.
1.20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಈ ವಸತಿ ಸಂಕೀರ್ಣವು 6 ಮನೆಗಳನ್ನು ಹೊಂದಿದ್ದು, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳು ಹಾಗೂ ಕಚೇರಿಯ ಪ್ರಥಮ ದರ್ಜೆಯ ಸಹಾಯಕ ಸಿಬ್ಬಂದಿಗಳ ವಾಸಕ್ಕೆಂದು ನಿರ್ಮಿಸಲಾಗಿದೆ.
ADVT
ಈ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ, ಸಾಮಾಜಿಕ ಕಾರ್ಯಕರ್ತ ವಿಜಯ ಮಿರಾಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹಿಮವತಿ ಭಟ್ , ಆನಂದ ಎಚ್.ಎನ್, ವಲಯ ಅರಣ್ಯಾಧಿಕಾರಿಗಳಾದ ಬಾಲಸುಬ್ರಹ್ಮಣ್ಯ, ಪ್ರಸಾದ ಪೆಡ್ನೇಕರ, ಎಚ್.ಎನ್.ನದಾಫ್, ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.
ಹೊಸದಾಗಿ ಅತಿಕ್ರಮಿಸಿ ಕಟ್ಟಲಾದ ಮನೆ ತೆರವು.
ಪಟ್ಟಣದ ರಾಮಾಪುರ ಅರಣ್ಯ ಪ್ರದೇಶದಲ್ಲಿ ಹೊಸದಾಗಿ ಅತಿಕ್ರಮಿಸಿ ನಿರ್ಮಿಸಲಾಗಿದ್ದ ಮನೆಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದಾರೆ.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebo ok.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026 ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026 ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026 ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026 ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026 ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation