21-5-2021 ಶನಿವಾರ.

E-YELLAPUR.COM NEWS ಯಲ್ಲಾಪುರ.

ಜಿಲ್ಲಾಪಂಚಾಯತಿ ಉತ್ತರಕನ್ನಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಲಜೀವನ ಮಿಷನ್ ಯೋಜನೆಯ ಅಡಿಯಲ್ಲಿ

ADVT

ಯಲ್ಲಾಪುರ,ಶಿರಸಿ,ಸಿದ್ದಾಪುರ,ಮುಂಡಗೋಡ,ಹಳಿಯಾಳ,ಜೋಯ್ಡಾ,ದಾಂಡೇಲಿ ತಾಲೂಕುಗಳ ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಒಗಳು

ADVT

ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಶಾಖಾಧಿಕಾರಿಗಳಿಗೆ ತಾಂತ್ರಿಕ ತರಬೇತಿ ಕಾರ್ಯಾಗಾರವು ಪಟ್ಟಣದ ಅಡಕೆ ಭವನದಲ್ಲಿ ಶನಿವಾರ ನಡೆಯಿತು.

ADVT

ಜೆ.ಎ.ಎಂ.ಯೋಜನೆಯ ಅನುಷ್ಠಾನ ಹಾಗೂ ವಿವಿಧ ತಾಂತ್ರಿಕ ಸಲಹೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಿದರು. ಮುಖ್ಯ ತರಬೇತುದಾರರಾಗಿ ಆಗಮಿಸಿದ್ದ ನಿವೃತ್ತ ಅಧೀಕ್ಷಕರಾದ ಬೆಂಗಳೂರಿನ ಚಂದ್ರಶೇಖರ ಮಾಸಗುಪ್ಪಿ ಮಾತನಾಡಿದರು.

ADVT

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜನೀಯರ್ ಪ್ರಕಾಶ, ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕ ಜಗದೀಶ ಮುಂತಾದವರು ಇದ್ದರು.

ADVT

ADVT

ಜಲೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಲ್ಲಾಪುರ ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್ ಸೇರಿದಂತೆ

ADVT

7 ತಾಲೂಕುಗಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಒಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಶಾಖಾಧಿಕಾರಿಗಳು ಇದ್ದರು.

ADVT

ರಾಜ್ಯ ಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ.

ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625ಕ್ಕೆ 623 ಅಂಕ ಪಡೆದು ರಾಜ್ಯ ಮಟ್ಟದ ಸಾಧನೆ ಮಾಡಿದ ಯಲ್ಲಾಪುರ ತಾಲೂಕಿನ ನಂದೊಳ್ಳಿ ಸರ್ಕಾರಿ ಪ್ರೌಢ ಶಾಲೆಯ ಯಶಸ್ ಭಾಗ್ವತ್ ಹಾಗೂ ಹಿತ್ಲಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಿಂಚನಾ ಹೆಗಡೆಯವರನ್ನು ಶಿಕ್ಷಣ ಇಲಾಖೆಯ ಪರವಾಗಿ ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಹಾಗೂ ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಷಣ್ಮುಖ ಹೆಗಡೆ ಹಾಗೂ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಇದ್ದರು.

ADVT

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading