23-5-2022. ಸೋಮವಾರ.
E-YELLAPUR.COM NEWS ಯಲ್ಲಾಪುರ.
ಯಲ್ಲಾಪುರ ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಸೋಮವಾರ ವಾರ್ಷಿಕ ವರ್ಧಂತಿ ಉತ್ಸವ ಕಾರ್ಯಕ್ರಮವು ನಡೆಯಿತು. ಈ ನಿಮಿತ್ತ
ADVT
ದೇವಾಲಯದಲ್ಲಿ ರುದ್ರಹೋಮ,ಗಣಹವನ,ರುದ್ರಾಭಿಷೇಕ, ಪೂರ್ಣಾಹುತಿ ಮುಂತಾದ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಸೋಮವಾರ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಪ್ರಕೃತಿ ವಿಕೋಪ ಮುಂಜಾಗ್ರತೆಗೆ ನೋಡಲ್ ಅಧಿಕಾರಿಗಳ ನೇಮಕ.
2022-23 ನೇ ಸಾಲಿನ ಮಳೆಗಾಲದ ಸಂದರ್ಭದಲ್ಲಿ ಪ್ರಕೃತಿವಿಕೋಪದಿಂದ ಯಾವುದೇ ಹಾನಿ ಸಂಭವಿಸಿದಲ್ಲಿ ತಕ್ಷಣ ಮಾಹಿತಿ ನೀಡಲು ಮತ್ತು ಪ್ರಕೃತಿ ವಿಕೋಪದ ಕುರಿತು ಮುಂಜಾಗ್ರತೆ
ADVT
ವಹಿಸಲು ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಹಾಗೂ ಯಲ್ಲಾಪುರ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಓರ್ವ ತಾಲೂಕಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ತಿಳಿಸಿದ್ದಾರೆ.
ADVT
ನೇಮಕಗೊಂಡ ಈ ನೋಡಲ್ ಅಧಿಕಾರಿಗಳು ಗ್ರಾಮ ಪಂಚಾಯತಿವಾರು ಅಧಿಕಾರಿ,ಸಿಬ್ಬಂದಿಗಳನ್ನೊಳಗೊಂಡ ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ಸಭೆ ನಡೆಸಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದುಕೊಂಡು, ಪ್ರಕೃತಿವಿಕೋಪದಿಂದ ಏನಾದರೂ
ADVT
ಅವಗಡ ಸಂಭವಿಸಿದ್ದಲ್ಲಿ ಕೂಡಲೇ ಕಾರ್ಯಪ್ರವ್ರತ್ತರಾಗಬೇಕು ಹಾಗೂ ಈ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.
ಯಲ್ಲಾಪುರ ತಾಲೂಕಿನ ಪ್ರಕೃತಿ ವಿಕೋಪ ಸಹಾಯವಾಣಿ ಕೇಂದ್ರವನ್ನು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಸಹಾಯವಾಣಿ ಸಂಖ್ಯೆ-9902571927.
ADVT
ಯಾವ ಪಂಚಾಯತಿಗೆ ಯಾವ ಅಧಿಕಾರಿ ? ಇಲ್ಲಿದೆ ವಿವರ.
ಕಣ್ಣಿಗೇರಿ-ಯಲ್ಲಾಪುರ ವಲಯ ಅರಣ್ಯಾಧಿಕಾರಿ ಬಾಲಸುಬ್ರಹ್ಮಣ್ಯ, ಇಡಗುಂದಿ- ಇಡಗುಂದಿ ವಲಯ ಅರಣ್ಯಾಧಿಕಾರಿ ಪ್ರಸಾದ ಪೆಡ್ನೇಕರ್, ಆನಗೋಡು-ತೋಟಗಾರಿಕಾ ಇಲಾಖೆಯ ಸುಭಾಷ ಹೆಗಡೆ, ದೇಹಳ್ಳಿ-ಅಕ್ಷರ ದಾಸೋಹದ ಶ್ರೀರಾಮ ಹೆಗಡೆ,
ADVT
ವಜೃಳ್ಳಿ- ಸಮಾಜ ಕಲ್ಯಾಣ ಇಲಾಖೆಯ ಮನೀಷ ನಾಯಕ, ಮಾವಿನಮನೆ-ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಶ್ರೀಕಾಂತ ದೇವಲತ್ತಿ, ಕಿರವತ್ತಿ-ಪಂಚಾಯತ್ ರಾಜ್ ಲಾಖೆಯ ಅಶೋಕ ಬಂಟ
ADVT
ಮದನೂರು- ಕಿರವತ್ತಿ ವಲಯ ಅರಣ್ಯಾಧಿಕಾರಿ ಎನ್.ಎಲ್.ನದಾಪ್, ಕಂಪ್ಲಿ-ಹಾಸಣಗಿ-ಮಂಚಿಕೇರಿ ವಲಯ ಅರಣ್ಯಾಧಿಕಾರಿ ಅಮಿತ ಚೌಹಾಣ, ಹಿತ್ಲಳ್ಳಿ-ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ,
ADVT
ಉಮ್ಮಚಗಿ-ಲೋಕೋಪಯೋಗಿ ಎಇಇ ವಿ.ಎಂ.ಭಟ್ಟ, ಕುಂದರಗಿ-ಕೃಷಿ ಇಲಾಖೆಯ ನಾಗರಾಜ ನಾಯ್ಕ, ಚಂದಗುಳಿ-ಪಶೂಸಂಗೋಪನಾ ಇಲಾಖೆಯ ಡಾ.ಸುಬ್ರಾಯ ಭಟ್ಟ, ನಂದೊಳ್ಳಿ- ಶಿಶು ಅಭಿವೃದ್ಧಿ ಇಲಾಖೆಯ ರಫೀಕ ಹಳ್ಳೂರು, ಯಲ್ಲಾಪುರ ಪಟ್ಟಣ- ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂಗನಬಸಯ್ಯ.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related