30-5-2022. ಸೋಮವಾರ.
E-YELLAPUR.COM NEWS ಯಲ್ಲಾಪುರ.
ಯಲ್ಲಾಪುರ ತಾಲೂಕಿನ ಬ್ಯಾಂಕ್, ಸೊಸೈಟಿ ಪ್ರಮುಖರು ಹಾಗೂ ಆಭರಣಗಳ ಅಂಗಡಿಕಾರರಿಗೆ ಸುರಕ್ಷತಾ ಜಾಗೃತಿ ಕಾರ್ಯಾಗಾರವು ಪಟ್ಟಣದ ಏಪಿಎಂಸಿ ಆವಾರದ ಅಡಕೆ ಭವನದಲ್ಲಿ ಸೋಮವಾರ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಪಿಐ ಸುರೇಶ ಯಳ್ಳೂರು ಮಾತನಾಡಿ, ಬ್ಯಾಂಕ್ ಹಾಗೂ ಸೊಸೈಟಿಯವರು, ಆಭರಣ ಅಂಗಡಿ ಮಾಲೀಕರು ಯಾವುದೇ ಕಾರಣಕ್ಕೂ ಸುರಕ್ಷತೆಯನ್ನು ನಿರ್ಲಕ್ಷಿಸಬಾರದು. ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಹಾಗೂ ಆಧುನಿಕ ಸುರಕ್ಷಾ ಉಪಕರಣಗಳನ್ನು ಅಳವಡಿಸಿಕೊಳ್ಳಬೇಕು.
ADVT
ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದರಿಂದ ಅಪರಾಧಗಳು, ಕಳ್ಳತನ ನಡೆದರೆ ಆರೋಪಿಗಳ ಪತ್ತೆಗೆ ಸಿಸಿ ಕ್ಯಾಮರಾಗಳು ಸಹಕಾರಿಯಾಗುತ್ತವೆ.
ಅಮೂಲ್ಯ ಸೊತ್ತುಗಳ ರಕ್ಷಣೆಗೆ ಹಾಗೂ ಜೀವ ರಕ್ಷಣೆ ಬಗ್ಗೆ ನಿಗಾ ಇಡಬೇಕಾಗಿದ್ದು, ಸುರಕ್ಷತಾ ಸಾಧನಗಳ ಅಳವಡಿಕೆ ಅತ್ಯಂತ ಅಗತ್ಯವಾಗಿದೆ. ಇತ್ತೀಚೆಗೆ ಪಟ್ಟಣದ ಎಸ್.ಬಿ.ಐ.ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯ ಪತ್ತೆಗೆ ಸಿ.ಸಿ.ಕ್ಯಾಮರಾ ನೆರವಾಗಿದೆ.
ADVT
ಮುಂದಿನ ದಿನಗಳಲ್ಲಿ ಹಣಕಾಸು ಸಂಸ್ಥೆಗಳು ಹಾಗೂ ಆಭರಣ ಅಂಗಡಿಕಾರರು ಅಳವಡಿಸಿಕೊಂಡ ಸುರಕ್ಷತಾ ಸಾಧನಗಳ ಪರಿಶೀಲನೆ ನಡೆಸಲಾಗುವುದು. ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷ್ಯ ಮಾಡಿದರೆ ದಂಡ ವಿಧಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ADVT
ವಿಕಾಸ ಅರ್ಬನ್ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ ಮಾತನಾಡಿ, ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕೇ ವಿನಃ ಈ ವಿಷಯದಲ್ಲಿ ಬೇರೆಯವರನ್ನು ದೂರಬಾರದು.
ADVT
ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಿಕೊಂಡು, ಕ್ಯಾಮರಾ ನಿರ್ವಹಣೆಗೆ ಪ್ರತ್ಯೇಕ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಬೇಕು ಎಂದರು. ಪಟ್ಟಣದ ವಿಕಾಸ ಅರ್ಬನ್ ಬ್ಯಾಂಕಿನವರು ಅಳವಡಿಸಿದ್ದ ಉತ್ತಮ ಗುಣಮಟ್ಟದ ಸಿ.ಸಿ. ಕ್ಯಾಮರಾದಲ್ಲಿ ದಾಖಲಾದ ಮಾಹಿತಿಯ ಆಧಾರದಲ್ಲಿ ಎಸ್.ಬಿ.ಐ. ಬ್ಯಾಂಕ್ ಕಳ್ಳತನ ಯತ್ನ ನಡೆಸಿದ್ದ ಆರೋಪಿಯ ಪತ್ತೆಗೆ ಸಹಕಾರಿಯಾದ ಹಿನ್ನೆಲೆಯಲ್ಲಿ,
ADVT
ಹಾಗೂ ಉತ್ತಮ ಗುಣಮಟ್ಟದ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಮಾದರಿಯಾದ ಕಾರಣಕ್ಕಾಗಿ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ ಹಾಗೂ ವ್ಯವಸ್ಥಾಪಕ ಉಮೇಶ ಭಾಗ್ವತ್ ಅವರನ್ನು ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು.
ADVT
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಹುಬ್ಬಳ್ಳಿಯ ಹಸನ್ ಮುಲ್ಲಾ ಹಾಗೂ ಶಿವಾಜಿ ವಿವಿಧ ಸುರಕ್ಷತಾ ಸಾಧನಗಳ ಕುರಿತು ಮಾಹಿತಿ ನೀಡಿದರು.
ADVT
ತಾಲೂಕಿನ ವಿವಿಧ ಬ್ಯಾಂಕ್, ಸೊಸೈಟಿ, ಆಭರಣ ಅಂಗಡಿಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಪೊಲೀಸ್ ಸಿಬ್ಬಂದಿ ನಾಗಪ್ಪ ಲಮಾಣಿ ನಿರ್ವಹಿಸಿದರು. ಪಿಎಸ್ಸೈ ಮಂಜುನಾಥ ಗೌಡರ್ ವಂದಿಸಿದರು.
ADVT
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related