5-6-2022. ರವಿವಾರ.

E-YELLAPUR.COM NEWS ಯಲ್ಲಾಪುರ.

ಮನುಕುಲದ ಉತ್ತಮ ಭವಿಷ್ಯಕ್ಕಾಗಿ ಹಾಗೂ ಎಲ್ಲರ ಒಳಿತಿಗಾಗಿ ನಾವೆಲ್ಲರೂ ಪರಿಸರವನ್ನು ರಕ್ಷಿಸಬೇಕು. ಗಿಡಗಳನ್ನು ನೆಡುವ ಮೂಲಕ ಅರಣ್ಯವನ್ನು ಬೆಳೆಸಬೇಕು ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ಹೇಳಿದರು.

ADVT

ಯಲ್ಲಾಪುರ ಪಟ್ಟಣದ ಎಪಿಎಂಸಿ ಸಮೀಪದ ಸಸ್ಯೋದ್ಯಾನದಲ್ಲಿ ರವಿವಾರ ನಡೆದ ವಿಶ್ವಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತೋತ್ಸವ ಕಾರ್ಯಕ್ರಮಕ್ಕೆ ವೃಕ್ಷಾರೋಪಣ ಹಾಗೂ ಬೀಜ ಬಿತ್ತುವ ಮೂಲಕ ಚಾಲನೆ ನೀಡಿದ ಅವರು ಮಾತನಾಡಿ, ಅರಣ್ಯವನ್ನು ಸಂರಕ್ಷಿಸಲು ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು.

ADVT

ಅಮೂಲ್ಯವಾದ ಅರಣ್ಯವನ್ನು, ವನ್ಯ ಸಂಪತ್ತನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ವರ್ಷ ಒಂದು ವಾರಗಳ ಕಾಲ ಬಿತ್ತೋತ್ಸವ ಕಾರ್ಯಕ್ರಮವನ್ನು ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ADVT

ವಿಶೇಷವಾಗಿ ಸ್ಥಳೀಯವಾಗಿ ಲಭ್ಯವಿರುವ ವಿವಿಧ ಜಾತಿಯ ಬೀಜಗಳನ್ನು ಬಿತ್ತುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಜೂ.12ರವರೆಗೂ ಈ ಕಾರ್ಯ ಮುಂದುವರಿಯಲಿದೆ. ಯಲ್ಲಾಪುರ ಉಪವಿಭಾಗದ ಎಲ್ಲ ವಲಯಗಳಲ್ಲಿಯೂ ಸ್ಥಳೀಯರ ಸಹಕಾರ, ನಾನಾ ಸಂಘಟನೆಗಳ ಸಹಯೋಗದೊಂದಿಗೆ ಬೀಜ ಬಿತ್ತನೆ ಕಾರ್ಯವನ್ನು ಕೈಗೊಳ್ಳಲಾಗುವುದು.

ADVT

ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅರಣ್ಯ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಬಿತ್ತೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ADVT

ಇದೇ ಸಂದರ್ಭದಲ್ಲಿ ಸಸ್ಯೋದ್ಯಾನದಲ್ಲಿ ಸ್ಥಳೀಯವಾಗಿ ಲಭ್ಯ ಇರುವ ವಿವಿಧ ಬೀಜಗಳನ್ನು ಬಿತ್ತಲಾಯಿತು. ಈ ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹಿಮವತಿ ಭಟ್, ಆನಂದ,

ADVT

ಯಲ್ಲಾಪುರ ವಲಯ ಅರಣ್ಯಾಧಿಕಾರಿ ಬಾಲಸುಬ್ರಹ್ಮಣ್ಯ ಹಾಗೂ ಇಲಾಖೆಯ ಸಿಬ್ಬಂದಿಗಳು, ಶಾಲಾ ಮಕ್ಕಳು, ಸಾರ್ವಜನಿಕರು, ವಿವಿಧ ಗ್ರಾಮಾಭಿವೃದ್ಧಿ ಸಮಿತಿಯ ಪ್ರಮುಖರು,

ADVT

ನಾನಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸ್ಕೌಟ್ಸ್ ಮತ್ತು ಗೌಡ್ಸ್ ತಂಡದವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಇದ್ದರು.

ADVT

ADVT

ADVT

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading