
3-7-2022. ರವಿವಾರ.
ಆಜಾದಿ ಕಾ ಅಮೃತಮಹೋತ್ಸವ ಅಂಗವಾಗಿ ಅರಣ್ಯ ಇಲಾಖೆಯ ವತಿಯಿಂದ ಯಲ್ಲಾಪುರ ಪಟ್ಟಣದ ಗಾಂಧಿನಗರದಲ್ಲಿ ಆಯೋಜಿಸಲಾಗಿದ್ದ ವೃಕ್ಷೋದ್ಯಾನ ನಿರ್ಮಾಣಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ರವಿವಾರ ಚಾಲನೆ ನೀಡಿದರು.

ವೃಕ್ಷಾರೋಪಣ ಮಾಡಿ, ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಯಲ್ಲಾಪುರ ಅರಣ್ಯ ವಿಭಾಗದಉಪಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ, ತಹಸೀಲ್ದಾರ್ ಶ್ರಿಕೃಷ್ಣ ಕಾಮ್ಕರ್,

ವಿವೇಕ ಹೆಬ್ಬಾರ್. ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್, ಸ್ಥಾಯಿ ಸಮಿತಿಯ ಅಧ್ಯಕ್ಷ ಆದಿತ್ಯ ಗುಡಿಗಾರ, ಎಸಿಎಫ್ ಆನಂದ, ಡಿಆರ್ಎಫ್ಒ ಸಂಜಯ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.



ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/





