ಟ್ರ್ಯಾಕ್ಸ್ ತೂಫಾನ್ ವಾಹನ ಹಾಗೂ ಲಾರಿಯ ನಡುವೆ ಡಿಕ್ಕಿ ಸಂಭವಿಸಿ, ಇಬ್ಬರಿಗೆ ಗಾಯವಾದ ಘಟನೆ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಆರೋಪಿ ಲಾರಿ ಚಾಲಕನು ತನ್ನ ಲಾರಿಯನ್ನು ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದು, ಮಾವಳ್ಳಿ ಕ್ರಾಸ್ ಸಮೀಪ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಟ್ರ್ಯಾಕ್ಸ್ ತೂಫಾನ್ ವಾಹನಕ್ಕೆ ಡಿಕ್ಕಿಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಟ್ರಾಕ್ಸ್ ತೂಫಾನ್ ವಾಹನದ ಚಾಲಕ ರಮೇಶ ಹಾಗೂ ವಾಹನದಲ್ಲಿದ್ದ ಅಮರೇಶ ಅವರಿಗೆ ಗಾಯವಾಗಿದೆ. ಈ ಕುರಿತು ಮಂಗಳೂರು ಪಂಜಿಮೊಗರುವಿನ ರಂಗಪ್ಪ ಕರಿಯಪ್ಪ ನೋಟಗಾರ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

======================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading