ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದ ಬುಲೆರೋ ಪಿಕ್ ಅಪ್ ವಾಹನವು ಸ್ಕೂಟಿಗೆ ಡಿಕ್ಕಿಹೊಡೆದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರವಾದ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸ್ಕೂಟಿ ಸವಾರನು ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: ಉತ್ತರಕನ್ನಡ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ ಆಯೋಜನೆ, ಫೋಟೋಗಳಿಗೆ ಆಹ್ವಾನ

ಆರೋಪಿ ಉತ್ತರಪ್ರದೇಶ ರಾಜ್ಯದ ಮಿರ್ಜಾಪುರದ ನಾಗೇಂದ್ರ ತಂದೆ ಚಂದ್ರಮಣಿ ಎಂಬಾತ ಅ.17ರಂದು ಸಂಜೆ ತನ್ನ ಹೊಸ ಬುಲೆರೋ ಪಿಕ್ ಅಪ್ ವಾಹನವನ್ನು ಹಳಿಯಾಳ ಕಡೆಯಿಂದ ಯಲ್ಲಾಪುರ ಕಡೆಗೆ ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ತೀರಾ ರಸ್ತೆಯ ಬಲಬದಿಗೆ ಚಲಾಯಿಸಿಕೊಂಡುಬಂದು, ಕಣ್ಣಿಗೇರಿ ಸಮೀಪ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ, ಹಳಿಯಾಳ ಕ್ರಾಸ್ ನಿಂದ ಕಣ್ಣಿಗೇರಿ ಮಾರ್ಗವಾಗಿ ತನ್ನ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದ ಕಣ್ಣಿಗೇರಿ ಸಮೀಪದ ಗುಡ್ನಹೊಂಡ ನಿವಾಸಿ 60 ವರ್ಷದ ದೆಮೊ ತಂದೆ ಗಣೇಶ ಮರಾಠಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ರವಿವಾರ ಮೃತಪಟ್ಟಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading